ಗದಗ ಜಿಲ್ಲೆಯಲ್ಲೂ ಬಿಟ್ಟೂ ಬಿಡದೇ ಮಳೆ-ಜನಜೀವನ ಅಸ್ತವ್ಯಸ್ತ

Spread the love

 

ಪ್ರಜಾಪಥ ವಾರ್ತೆ

ಗದಗ: ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲೂ ಮೇಘ ಸ್ಫೋಟಗೊಂಡಂತಿದೆ.

ಬೆಳಗ್ಗೆಯಿಂದಲೇ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಅವಳಿ ನಗರ ಗದಗ-ಬೆಟಗೇರಿ ಸೇರಿ ಜಿಲ್ಲೆಯ ತಗ್ಗುಪ್ರದೇಶದ ಜನವಸತಿ ಪ್ರದೇಶಗಳಲ್ಲಿ ನೀರು ನುಗ್ಗಿ, ರಸ್ತೆಗಳೆಲ್ಲ ಕೆರೆಯಂತಾಗಿವೆ.

ಮಳೆಯಿಂದಾಗಿ ಜನ ಹೊರಬರದಂತಹ ವಾತಾವರಣ ನಿರ್ಮಾಣವಾಗಿದೆ. ಮಣ್ಣಿನ ಮನೆಗಳಲ್ಲಿ ವಾಸಿಸುವ ಜನ ಆತಂಕದಲ್ಲೇ ಹೊತ್ತು ಕಳೆಯುತ್ತಿದ್ದಾರೆ..

Leave a Reply

Your email address will not be published. Required fields are marked *